ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಕೆರೆಗೆ ಉರುಳಿ ಬಿದ್ದ ಘಟನೆ ಹುಬ್ಬಳಿ ಹೊರವಲಯದಲ್ಲಿ ನಡೆದಿದೆ.
ವರೂರ್ ಕ್ರಾಸ್ ಬಳಿ ಇರುವ ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಫಾರ್ಮ್ ಹೌಸ್ ನ ಕೆರೆಗೆ ಖಾಸಗಿ ಬಸ್ ವೊಂದು ಉರುಳಿ
ಬಿದ್ದಿದೆ. ಈ ಬಸ್ ಬೆಂಗಳೂರಿನಲ್ಲಿ ಮುಂಬೈಗೆ ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಬಸ್ ನಲ್ಲಿದ್ದ 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಆಸ್ಪತ್ರೆಗೆ
ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Comments