೫೦ ಸಾವಿರ ಹಣ ವರ್ಗಾವಣೆಗೆ ಆಧಾರ್ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರ ಈಗ ಬ್ಯಾಂಕ್ ಖಾತೆ ತೆರೆಯಲು ಮತ್ತು ೫೦ ಸಾವಿರ ರೂ. ಹಣ ವರ್ಗಾವಣೆ ಮಾಡಲು ಆಧಾರ ಅನ್ನು ಕಡ್ಡಾಯಗೊಳಿಸಿದೆ. ಬ್ಯಾಂಕ್ ಖಾತೆಗಳಿಗೆ ಆಧಾರ್ ಈ ಹಿಂದೆ ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರ ಈಗ ೨೦೧೭ರ ಡಿಸೆಂಬರ್ ೩೧ರ ಒಳಗಡೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಬೇಕು. ಒಂದು ವೇಳೆ ಜೋಡಣೆ ಮಾಡದೇ ಇದ್ದರೆ ಬ್ಯಾಂಕ್ ಖಾತೆಯನ್ನು ಅಸಿಂಧುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕಂಪನಿಗಳು, ವ್ಯಕ್ತಿಗಳು ಜತೆಯಾಗಿ ವ್ಯವಹಾರ ನಡೆಸುವ ಮಂದಿ ೫೦ ಸಾವಿರ ರೂ. ಹಣದ ವ್ಯವಹಾರ ನಡೆಸಿದರೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೇಳಿದೆ. ಜೂನ್ ೧ರಿಂದ ತೆರಿಗೆ ವಿವರ ಸಲ್ಲಿಕೆಗೆ ಮತ್ತು ಪಾನ್ ಕಾರ್ಡ್ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಆಧಾರ್ ನಂಬರ್ ನೀಡಬೇಕೆಂದು ಕೇಂದ್ರ ನೇರ ತೆರಿಗೆಗಳ ಮಂಡಳಿ ಈ ಹಿಂದೆ ತಿಳಿಸಿತ್ತು.
Comments