ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆ;ಎಂ.ಬಿ. ಪಾಟೀಲ್ಗೆ ಮುಖಭಂಗ

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದ್ದು, ತಮ್ಮ ಹೇಳಿಕೆಯನ್ನ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ತಿರುಚಿದ್ದಾರೆ ಅಂತ ಸಿದ್ದಗಂಗಾ ಮಠ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಲಿಂಗಾಯತ-ವೀರಶೈವ ಎರಡು ಒಂದೇ, ಧರ್ಮವನ್ನ ಒಡೆಯಬೇಡಿ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವ ಎಂ.ಬಿ ಪಾಟೀಲ್ಗೆ ಭಾರೀ ಮುಖಭಂಗವಾಗಿದೆ.
ಕಳೆದ ಭಾನುವಾರ ಮಾತನಾಡಿದ್ದ ಸಚಿವ ಎಂ.ಬಿ ಪಾಟೀಲ್, ದೊಡ್ಡ ಶ್ರೀಗಳು ಪ್ರತ್ಯೇಕ ಲಿಂಗಾಯತ ಬೇಕೆಂದಿದ್ದಾರೆ ಎಂದು ತಿಳಿಸಿದ್ದರು. ಇವರ ಈ ಹೇಳಿಕೆ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಇವತ್ತು ಮತ್ತೆ ಪ್ರತಿಕ್ರಿಯಿಸಿದ್ದ ಸಚಿವ ಎಂ.ಬಿ ಪಾಟೀಲ್, ನಾನು ಸುಳ್ಳು ಹೇಳಿದ್ದೇ ಆದ್ರೆ ಆ ಪಾಪ ನನಗೆ ನನ್ನ ಕುಟುಂಬಕ್ಕೆ ತಟ್ಟಲಿ ಅಂತ ಸವಾಲು ಹಾಕಿದ್ದಾರೆ.
Comments