ಸಿದ್ದರಾಮಯ್ಯ ಸರ್ಕಾರದಲ್ಲಿ ಸೂಟ್ಕೇಸ್ ಕೊಟ್ರೆನೇ ಕೆಲಸ ಆಗೋದಂತೆ

ಸಿಎಂ ಸಿದ್ದರಾಮಯ್ಯನವರ ಭರವಸೆ ಒಂದೆ ದಿನಕ್ಕೆ ಮಾತ್ರ ಸೀಮಿತ ವಿಧಾನಸೌಧಕ್ಕೆ ಸೂಟ್ಕೇಸ್ ತುಂಬಾ ಹಣ ತುಂಬಿಕೊಂಡು ಹೋದ್ರೆ ಮಾತ್ರ ಕೆಲಸ ಆಗುತ್ತೆ.
ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಮಲ್ಲಿಕಾ ಘಂಟಿ ಅವರು ಹೀಗಾಗೇ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಯಾಗುತ್ತಿಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಳೇ ಸ್ವಂತ ಸರ್ಕಾರದ ವಿರುದ್ಧ ಹೇಳಿಕೆಯನ್ನು ನೀಡಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಹಂಪಿ ಕನ್ನಡ ವಿಶ್ವ ವಿದ್ಯಾಲಯಕ್ಕೀಗ ಬೆಳ್ಳಿಹಬ್ಬದ ಸಂಭ್ರಮ. ಬೆಳ್ಳಿಹಬ್ಬದ ಅಂಗವಾಗಿ ಆಯೋಜಿಸಿದ್ದ ನುಡಿಹಬ್ಬವನ್ನು ಮಂಗಳವಾರ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ರು. ಈ ವೇಳೆ ಹಂಪಿ ಕನ್ನಡ ವಿವಿಯಲ್ಲಿನ ಸಿಬ್ಬಂದಿ ಅಧ್ಯಾಪಕರ ಕೊರತೆ ನೀಗಿಸುವ ಭರವಸೆಯನ್ನು ಸಿಎಂ ನೀಡಿದ್ರು. ಆದ್ರೆ ಎರಡನೇ ದಿನದ ವಿಚಾರ ಸಂಕಿರಣ ಸಮಾರಂಭದಲ್ಲಿ ಹಂಪಿ ಕನ್ನಡ ವಿವಿಯ ಉಪಕುಲಪತಿ ಡಾಕ್ಟರ್ ಮಲ್ಲಿಕಾ ಘಂಟಿ, ಸಿಎಂ ಸಿದ್ದರಾಮಯ್ಯ ಭರವಸೆಯ ಭಾಷಣದ ವಿರುದ್ಧವಾಗಿ ಮಾತನಾಡಿ ನೋವು ತೋಡಿಕೊಂಡಿದ್ದಾರೆ.
Comments