ದೇವೇಗೌಡರು ಮತ್ತು ಕುಮಾರಣ್ಣ ನನಗೆ ಟಿಕೆಟ್ ನೀಡುತ್ತಾರೆ : ಬಿ.ನಂಜಾಮರಿ

23 Nov 2017 9:59 AM | General
430 Report

ತಿಪಟೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಜೆಡಿಎಸ್ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಬಿ.ನಂಜಾಮರಿ ಸ್ಪಷ್ಟಪಡಿಸಿದರು. ತಾಲ್ಲೂಕಿನ ಬೆಳಗರಹಳ್ಳಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿದರು.

ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನನಗೆ ಟಿಕೆಟ್ ನೀಡುತ್ತಾರೆ ಎಂಬ ನಂಬಿಕೆ ಇದೆ. ಜೆಡಿಎಸ್ ನನ್ನ ಮಾತೃ ಪಕ್ಷವಾಗಿದೆ. ದೇವೇಗೌಡ ಅವರು ಟಿಕೆಟ್ ನೀಡುವುದಾಗಿ ನನ್ನ ಹೆಸರನ್ನು ತಮ್ಮ ಅಧಿಕೃತ ಡೈರಿಯಲ್ಲಿ ಬರೆದಿಟ್ಟಿದ್ದಾರೆ’ ಎಂದರು.ಎರಡು ಅವಧಿಯಲ್ಲಿ ಶಾಸಕನಾಗಿದ್ದ ವೇಳೆ ತಾಲ್ಲೂಕಿಗೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಿಸಿದ್ದೇವೆ. ಅವು ಈಗಲೂ ನನ್ನ ಕೈ ಹಿಡಿಯುತ್ತವೆ ಎಂಬ ನಂಬಿಕೆ ಇದೆ. ಮತ್ತೆ ಶಾಸಕನಾದರೆ ಕ್ವಿಂಟಲ್ ಕೊಬ್ಬರಿ ಬೆಲೆ ₹ 15 ಸಾವಿರ ದಾಟಿಸುವುದು ಸತ್ಯ’ ಎಂದು ಹೇಳಿದರು.ನಗರಸಭೆ ಮಾಜಿ ಅಧ್ಯಕ್ಷ ದಿನೇಶ್‍ಕುಮಾರ್ ಮಾತನಾಡಿ, ‘ಜೆಡಿಎಸ್‍ನಿಂದ ಸ್ಪರ್ಧಿಸಿದರೆ ನಂಜಾಮರಿ ಶಾಸಕರಾಗುವುದು ಖಚಿತ. ಅವರ ಗೆಲುವಿಗೆ ಸಮಾನ ಮನಸ್ಕರೆಲ್ಲಾ ಒಗ್ಗಟ್ಟಾಗಿ ದುಡಿಯೋಣ’ ಎಂದರು.

Edited By

Shruthi G

Reported By

Shruthi G

Comments