Report Abuse
Are you sure you want to report this news ? Please tell us why ?
ವೀರೇಶ್ ಸೊಬರದಮಠಗೆ ದೇವೇಗೌಡ್ರು ದೂರವಾಣಿ ಕರೆ ಮಾಡಿದ್ದೇಕೆ?

26 Dec 2017 10:20 AM | General
363
Report
ಬಿಜೆಪಿ ಕಚೇರಿಯ ಎದುರು ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.
ಮಹದಾಯಿ ಹೋರಾಟಗಾರರ ಮುಂದಾಳತ್ವ ವಹಿಸಿದ್ದ ವೀರೇಶ್ ಸೊಬರದಮಠ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಎಚ್.ಡಿ.ದೇವೇಗೌಡ ಅವರು ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟದ ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಮಾತನಾಡುವುದಾಗಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ ಎಂದು ವೀರೇಶ್ ಸೊಬರದಮಠ ಅವರು ತಿಳಿಸಿದ್ದಾರೆ. ಇದರಿಂದಾಗಿ ಈ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

Edited By
Shruthi G

Comments