ಜೆಡಿಎಸ್ ಭದ್ರಕೋಟೆ ಉರುಳಿಸಲು ಬಿಜೆಪಿಯಿಂದ ಮಾಸ್ಟರ್ ಪ್ಲಾನ್ ರೆಡಿ..!!

ಜೆಡಿಎಸ್ ಭದ್ರಕೋಟೆ ಎಂದೇ ಹೆಸರಾದ ಮಂಡ್ಯ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿಯ ಪರಿವರ್ತನಾ ಯಾತ್ರೆ ನಡೆಯಲಿದೆ. ಮದ್ದೂರು, ಮಂಡ್ಯ, ನಾಗಮಂಗಲ, ಕೆಆರ್ ಪೇಟೆಯಲ್ಲಿ ಪರಿವರ್ತನಾ ಯಾತ್ರೆ ನಡೆಯಲಿದೆ. ಮದ್ದೂರಿನಲ್ಲಿ ನಡೆಯುವ ಬಿಜೆಪಿಯ ಪರಿವರ್ತನಾ ಯಾತ್ರೆಗೆ ಇದೇ ಮೊದಲ ಬಾರಿಗೆ ಎಸ್ಎಂ.ಕೃಷ್ಣ ಭಾಗವಹಿಸೋದು ಖಚಿತವಾಗಿದೆ.
ಎಸ್ಎಂ.ಕೃಷ್ಣ ಅವರು ಮೂಲತಃ ಮದ್ದೂರಿನ ಸೋಮನಹಳ್ಳಿ ಗ್ರಾಮದವರಾಗಿದ್ದು ರಾಜಕೀಯವಾಗಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಹೇಗಾದರೂ ಮಾಡಿ ಮಂಡ್ಯದಲ್ಲಿ ತನ್ನ ಖಾತೆ ತೆರೆಯಬೇಕೆಂದು ಹರಸಾಹಸ ಪಡುತ್ತಿರುವ ಬಿಜೆಪಿ, ಅದಕ್ಕಾಗಿ ಎಸ್ಎಂ.ಕೃಷ್ಣ ಅವರ ರಾಜಕೀಯ ಪ್ರಭಾವವನ್ನು ಬಳಸಿಕೊಳ್ಳಲು ಹೊರಟಿದೆ. ಕೇಂದ್ರ ಸಚಿವ ವಿಜಯ್ ಗೋಯಲ್ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ರು. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವುದರಿಂದ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗುವಂತೆ ಮನವಿ ಮಾಡಿದ್ದರು.
Comments