A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಬ್ರೇಕಿಂಗ್ ನ್ಯೂಸ್ : ಕುತೂಹಲ ಕೆರಳಿಸಿರುವ ಬಿ.ಎಸ್.ಯಡಿಯೂರಪ್ಪನವರ ಈ ಹೇಳಿಕೆ..!! | Civic News

ಬ್ರೇಕಿಂಗ್ ನ್ಯೂಸ್ : ಕುತೂಹಲ ಕೆರಳಿಸಿರುವ ಬಿ.ಎಸ್.ಯಡಿಯೂರಪ್ಪನವರ ಈ ಹೇಳಿಕೆ..!!

22 May 2018 12:57 PM | Politics
33091 Report

ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರಕಾರ ಎಷ್ಟು ದಿನ ಇರುತ್ತದೆ ಎಂಬುದನ್ನು ಕಾದು ನೋಡೋಣ. ಯಾವ ಸಮಯದಲ್ಲಿ ಚುನಾವಣೆ ಬಂದರೂ ಬಿಜೆಪಿ 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಮಿಷನ್ 150 ಕೇಲವೇ ಮತಗಳ ಅಂತರದಲ್ಲಿ ಕೈ ಜಾರಿದೆ. 25 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಬೆರಳೆಣಿಕೆಯ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಆದರೆ, ಮುಂದೆ ಯಾವಾಗ ಚುನಾವಣೆ ಬಂದರೂ ಬಿಜೆಪಿಯ ಗೆಲುವು ಶತಸಿದ್ಧ. ನಾನು ಯಾವುದೇ ಕಾರಣಕ್ಕೂ ಸೋಲಿಗೆ ಹೆದರುವುದಿಲ್ಲ. ರಾಜ್ಯದಾದ್ಯಂತ ಪ್ರವಾಸ ಮಾಡಿ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳನ್ನು ವಿಚಾರಿಸುತ್ತೇನೆ. ನಮ್ಮ ಸರ್ಕಾರದ ಸಾಧನೆಗಳ ಜತೆಗೆ ಜೆಡಿಎಸ್-ಕಾಂಗ್ರೆಸ್‌ನ ಅಪವಿತ್ರ ಮೈತ್ರಿ ಬಗ್ಗೆಯೂ ಜನರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಯಾರು ದುಡುಕಬೇಡಿ. ಅಭಿಮಾನಿಗಳು ಎಂದಿಗೂ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ನಿಮ್ಮ ಆಶೀರ್ವಾದ ದಿಂದ ಬಿಜೆಪಿ 104 ಸ್ಥಾನಗಳನ್ನು ಪಡೆದು ಕೇವಲ 8 ಸ್ಥಾನಗಳ ಕೊರತೆಯಿಂದ ಅಧಿಕಾರ ಕಳೆದುಕೊಂಡಿದೆ. ಮುಂದೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಸಂತೆಬೆನ್ನೂರಿನ ಚನ್ನಬಸಪ್ಪ ಅವರು ನನಗೆ ಸಿಎಂ ಸ್ಥಾನ ತಪ್ಪಿದ್ದಕ್ಕೆ ಮನನೊಂದು ಶನಿವಾರ ಸಂಜೆ ಹೃದಯಾಘಾತದಿಂದ ದೈವಾಧೀನರಾಗಿರುವುದು ವಿಷಾದನೀಯ. ಇದರಿಂದ ನನ್ನ ಮನಸ್ಸು ಬಹಳ ನೊಂದಿದೆ. ಇತರ ಪಕ್ಷಗಳ ದುರಾಡಳಿತಕ್ಕೆ ಬೇಸತ್ತು ರಾಜ್ಯದ ಲಕ್ಷಾಂತರ ಜನ ಇದೇ ರೀತಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕೆಂದು ಅಪೇಕ್ಷಿಸಿದ್ದರು. ಸಾಕಷ್ಟು ಜನ ಬಿಜೆಪಿಗೆ ಹೀಗೆ ಆಗಬಾರದಿತ್ತು ಎಂದು ನೋವು ತೋಡಿಕೊಂಡಿದ್ದಾರೆ ಎಂದರು.

Edited By

Shruthi G

Reported By

Shruthi G

Comments