ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ‘ಕೈ’ಶಾಸಕರ ಪುತ್ರಿ ಗರಂ..! ಕಾರಣ ಏನ್ ಗೊತ್ತಾ..?

ಸಚಿವ ಸಂಪುಟದಲ್ಲಿ ನೂತನ ಸಚಿವರು ಪ್ರಮಾಣ ವಚನವನ್ನು ಸ್ವೀಕರಿಸುತ್ತಿದ್ದರೆ ಮತ್ತೊಂದು ಕಡೆ ಸಚಿವ ಸ್ಥಾನ ತಪ್ಪಿದೆ ಎಂದು ಕೆಲವರು ಬೇಸರದಿಂದ ಇದ್ದಾರೆ. ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಿ.ಸಿ.ಪಾಟೀಲ್ ಪುತ್ರಿ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ.
ಬಿ.ಸಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿಯೇ ಟ್ವೀಟ್ ಮಾಡಿರುವ ಪುತ್ರಿ ಸೃಷ್ಠಿ ಪಾಟೀಲ್, ಸಚಿವ ಸ್ಥಾನ ಕೊಡದೇ ಇರೋದು ಬಿ.ಸಿ.ಪಾಟೀಲ್ ಗೆ ಮಾಡಿದ ದೊಡ್ಡ ಅನ್ಯಾಯ ಎಂದು ಬರೆದುಕೊಂಡಿದ್ದಾರೆ. ಬಿ.ಸಿ. ಪಾಟೀಲ್ ಗೆ ಸಚಿವ ಸ್ಥಾನ ನೀಡದೇ ಇರುವುದು ಹಿರೇಕೆರೂರು-ರಟ್ಟೀಹಳ್ಳಿ ತಾಲೂಕಿಗೆ ಮಾಡಿದ ದೊಡ್ಡ ಅನ್ಯಾಯ. ಬಿ.ಸಿ.ಪಾಟೀಲ್ ಗೆ ಸಚಿವ ಸ್ಥಾನದ ಅರ್ಹತೆ ಇದ್ದರೂ ಕಾಂಗ್ರೆಸ್ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ. ಸಚಿವ ಸಂಪುಟ ಕೈ ತಪ್ಪಿದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.
Comments