ಯಡಿಯೂರಪ್ಪರನ್ನು ಕೊಂಡಾಡಿದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

30 Aug 2017 12:09 PM |
3645 Report

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕದಲ್ಲಿನ ಬಿಜೆಪಿ ಸ್ಥಿತಿಗತಿ ನೋಡಿ ದಂಗಾಗಿ ಹೋಗಿದ್ದು, ಎರಡು ಪ್ರತ್ಯೇಕ ಏಜೆನ್ಸಿಗಳಿಂದ ಸರ್ವೇ ಮಾಡಿಸಿ ವರದಿ ಕೊಡಲು ಹೇಳಿದ್ದಾರಂತೆ.. ಅಮಿತ್ ಶಾ ಚುನಾವಣೆ ವೇಳೆ ನಾನೇ ಬಂದು ಕರ್ನಾಟಕದಲ್ಲಿ ವಾಸ್ತವ್ಯ ಹೂಡುತ್ತೇನೆ, ಇಲ್ಲವಾದಲ್ಲಿ ಕಷ್ಟವಿದೆ ಎಂದು ರಾಜ್ಯದ ಸಂಘ ನಾಯಕರ ಬಳಿ ಹೇಳಿಕೊಂಡಿದ್ದಾರಂತೆ

2016ರಲ್ಲಿ ಪ್ರಹ್ಲಾದ್ ಜೋಶಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದು ಯಡಿಯೂರಪ್ಪ ಅವರನ್ನು ನೇಮಿಸುವ ಸಂದರ್ಭದಲ್ಲಿ ಸ್ವತಃ ಅಮಿತ್ ಶಾ ಮತ್ತು ರಾಮಲಾಲ್ ಅವರು ಸಂತೋಷ್'ರನ್ನು ಕರೆದು ಯಡಿಯೂರಪ್ಪ ಬಗ್ಗೆ ಅಭಿಪ್ರಾಯ ಕೇಳಿದ್ದರಂತೆ. ಆಗ ಸಂತೋಷ್ ಅವರು, , ಚುನಾವಣೆಗೆ ಮೊದಲು ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ. ಆದರೆ ಈಗ ಒಂದೋ ಜೋಶಿ ಅವರನ್ನು ಮುಂದುವರೆಸಿ, ಇಲ್ಲವೇ ಸಿಟಿ ರವಿ ಅವರಿಗೆ ಜವಾಬ್ದಾರಿ ಕೊಡಿ ಎಂದು ಹೇಳಿದ್ದರಂತೆ. ಆದರೆ ಲಿಂಗಾಯತ ಫ್ಯಾಕ್ಟರ್ ಕಾರಣಕ್ಕಾಗಿ ಅಮಿತ್ ಶಾ ಅವರು ಯಡಿಯೂರಪ್ಪ ಹೆಸರಿಗೆ ಹಸಿರು ನಿಶಾನೆ ಕೊಟ್ಟಿದ್ದರು. ಆದರೆ ಕರ್ನಾಟಕಕ್ಕೆ ಬಂದು ಸಂಘ ನಾಯಕರನ್ನು ಭೇಟಿಯಾಗಿದ್ದ ಅಮಿತ್ ಶಾ, "ಯಡಿಯೂರಪ್ಪ ಬಹುತ್ ಪಾಪ್ಯುಲರ್ ಹೈ, ಲೇಕಿನ್ ಆಜುಬಾಜು ಮೇ ಗಡ್ಬಡಿ ಹೈ" ಎಂದು ಹೇಳಿದ್ದಾರಂತೆ.

Edited By

Suresh M

Reported By

Admin bjp

Comments