ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಬಂದರೆ ಎಲ್ಲ ಸಮಸ್ಯೆ ಇತ್ಯರ್ಥ : ದೇವೇಗೌಡ್ರು

27 Sep 2017 11:38 AM |
2755 Report

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು, ನಮ್ಮ ಪಕ್ಷವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಹಗುರವಾಗಿ ನೋಡುತ್ತಿವೆ ಆದ ಕಾರಣ ಪ್ರಾದೇಶಿಕ ಪಕ್ಷವನ್ನು ರಾಜ್ಯದಲ್ಲಿ ತರುಲು ಪ್ರಯತ್ನ ಮಾಡುತ್ತೇವೆ. ನಮ್ಮ ರಾಜ್ಯದಲ್ಲಾಗುತ್ತಿರುವ ಪ್ರಾದೇಶಿಕ ಸಮಸ್ಯೆಗಳನ್ನು ಆಲಿಸುತ್ತಿಲ್ಲ....

ನೀರಾವರಿ ವಿಷಯದಲ್ಲಿ ರಾಷ್ಟ್ರೀಯ ಪಕ್ಷಗಳು ದ್ವನಿ ಎತ್ತುತ್ತಿಲ್ಲ ಎಂದು ಗುಡುಗಿದರು. ಅಲ್ಲದೇ ಸಾರ್ವಜನಿಕರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದರು.ಜೆಡಿಎಸ್ ಪಕ್ಷದ ಮುಖಂಡ ಮತ್ತು ಮಾಜಿ ಪ್ರಧಾನಿ ದೇವೇಗೌಡ ಅವರ ಮುಖ್ಯ ಉದ್ದೇಶ ಸಾರ್ವಜನಿಕ ಹಿತಾಸಕ್ತಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ತರಬೇಕೆಂದು ತಿಳಿಸಿದ್ದಾರೆ.

Edited By

Shruthi G

Reported By

jds admin

Comments