ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಅಬ್ಯರ್ಥಿ ಘೋಷಣೆ, ಮುನೇಗೌಡರವರಿಗೆ ಟಿಕೆಟ್...ಕುಮಾರಸ್ವಾಮಿ




ದೇವನಹಳ್ಳಿಯ ಚಪ್ಪರದಕಲ್ಲಿನಬಳಿ ಆಯೋಜಿಸಲಾಗಿದ್ದ ಸಮಾವೇಶ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ಅಭ್ಯರ್ಥಿ ಘೋಷಣೆ ಮಾಡುವ ಮೂಲಕ ಕ್ಷೇತ್ರದಲ್ಲಿ ಚುನಾವಣೆಯ ಕಾವನ್ನು ಹೆಚ್ಚಿಸಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೆ ಮೊದಲೇ ಕುಮಾರಸ್ವಾಮಿ ಅಭ್ಯರ್ಥಿ ಘೋಷಿಸಿರುವುದು ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ವೆಂಕಟರಮಣಯ್ಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಮುನೇಗೌಡ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಅವರನ್ನು ಗೆಲ್ಲಿಸುವ ಹೊಣೆ ನಿಮ್ಮದು' ಎಂದು ಎಚ್.ಡಿ.ಕುಮಾರಸ್ವಾಮಿ ಸಮಾವೇಷದಲ್ಲಿ ಹೇಳಿದರು.
Comments