ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ಬಿಟ್ಟು ‘ತೆನೆ’ ಹೊತ್ತ ಶಾಸಕಿ.. ಯಾರ್ ಗೊತ್ತಾ..?

02 Nov 2018 10:31 AM |
27528 Report

ಬಿಜೆಪಿಗೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದ ಬೆನ್ನಲ್ಲೇ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಲೀಲಾವತಿ ಅವರು ಜೆಡಿಎಸ್ ಸೇರಿದ್ದಾರೆ.

ನಗರದ ತಾಲೂಕು ಜೆಡಿಎಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಇ. ಕೃಷ್ಣಪ್ಪ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಲೀಲಾವತಿ ಜೆಡಿಎಸ್ ಪಕ್ಷವನ್ನು ಸೇರಿಗೊಂಡಿದ್ದಾರೆ .ಈ ವೇಳೆ ಮಾತನಾಡಿದ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಅವರ ಸರ್ವಾಧಿಕಾರಿ ಧೋರಣೆ ಹಾಗೂ ಪಕ್ಷದಲ್ಲಿ ನನ್ನ ಹಾಗೂ ಬೆಂಬಲಿಗರನ್ನು ಕಡೆಗಣಿಸಿದ್ದರಿಂದ ಬೇಸತ್ತು ಜೆಡಿಎಸ್ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾದಂತಿದೆ..

Edited By

hdk fans

Reported By

hdk fans

Comments